ಬರೆಯುವುದು ಒಂದು ಕಲೆ! ಒಬ್ಬ ಬರಹಗಾರ ತನ್ನ ವಿಚಾರ, ಅನುಭವ ಮತ್ತು ಭಾವನೆಗಳನ್ನು ಜಗತ್ತಿಗೆ ತಿಳಿಸಬಯಸುವ ಮಾಧ್ಯಮವೇ ಬರವಣಿಗೆ. ಒಂದು ಸಂವಾದ, ಸಂಭಾಷಣೆ, ಓದು, ಪ್ರವಾಸ ಹೀಗೆ ಅನೇಕ ಮಾಧ್ಯಮಗಳ ಮೂಲಕ ಹೊಸ ಹೊಸ ವಿಚಾರ ಮತ್ತು ಅನುಭವಗಳಾಗಲಿ, ಭಾವನೆಗಳಾಗಲಿ ನಮ್ಮಲ್ಲಿ ಶೇಖರಣೆ ಆದಾಗ, ಒಬ್ಬ ಒಳ್ಳೆಯ ಲೇಖಕ ಅವುಗಳಿಗೆ ಸುಂದರವಾದ ಶಬ್ದಗಳನ್ನು ಪೋಣಿಸುತ್ತಾ ಒಂದು ರೂಪ ಕೊಡುತ್ತಾನೆ. ಕೆಲವು ಲೇಖಕರು ಇತಿಹಾಸ, ತತ್ವ-ಸಿದ್ಧಾಂತ, ಶ್ರೇಷ್ಠ ವ್ಯಕ್ತಿಗಳ ಜೀವನ ಚರಿತ್ರೆ, ಮುಂತಾದ ವಿಷಯಗಳ ಲೇಖನ/ಪುಸ್ತಕಗಳನ್ನು ಬರೆದರೆ ಇನ್ನು ಕೆಲವು ಭಾವನಾತ್ಮಕ ಜೀವಿಗಳು ತಮ್ಮ ಭಾವನೆಗಳನ್ನು ಕಥೆ, ಕವನ ಮತ್ತು ಕಾದಂಬರಿಗಳನ್ನು ಬರೆಯುವುದರ ಮೂಲಕ ವ್ಯಕ್ತಪಡಿಸುತ್ತಾರೆ. ಇನ್ನು ಕೆಲವು ಲೇಖಕರು ಪತ್ರಿಕೆ ಅಥವಾ ನಿಯತಕಾಲಿಕೆಗಳಿಗೆ ಅಂಕಣಗಳನ್ನು ಬರೆದು ಓದುಗರು ಮೆಚ್ಚುಗೆಗೆ ಪಾತ್ರರಾಗುತ್ತಾರೆ. ಈ ಮೂರು ವರ್ಗಗಳನ್ನು ಬಿಟ್ಟರೆ ಇತ್ತೀಚಿಗೆ ಕಂಡುಬರುವ ಇನ್ನೊಂದು ವರ್ಗವೆಂದರೆ ಬ್ಲಾಗ್ ಬರಹಗಾರರು. ಮುಂಚೆ ಬರೆಯುವ ಹವ್ಯಾಸ ಇರುವವರು, ತಮ್ಮ ಪುಟ್ಟ ಪುಟ್ಟ ಲೇಖನ, ಕಥೆ, ಕವನಗಳನ್ನು, ವಾರಪತ್ರಿಕೆ ಮಾಸಪತ್ರಿಕೆಗಳಲ್ಲಿ ಬರೀತಾಇದ್ದರು. ಈಗಲೂ ಕೂಡ ಕೆಲವರು ಈ ಹವ್ಯಾಸ ಬಿಟ್ಟಿಲ್ಲ. ಆದರೆ, ಈ ಬ್ಲಾಗ್ ಪದ್ಧತಿ ಬಂದಮೇಲೆ, ತಮ್ಮದೇ ಸ್ವಂತ ಬ್ಲಾಗ್ ಸೃಷ್ಟಿಸಿ ಅದರಲ್ಲಿ ಬರೆಯುದು ಸರ್ವೇ ಸಾಮಾನ್ಯ ಆಗ್ತಾಯಿದೆ. ಹೇಳಬೇಕಂದ್ರೆ ಕೇವಲ ಕನ್ನಡ ಭಾಷೆಯಲ್ಲಿಯೇ ಎಣಿಕೆಗೆ ಸಿಗದಷ್ಟು ಬ್ಲಾಗುಗಳು ಅಂತರ್ಜಾಲದಲ್ಲಿ ಪ್ರಚಲಿತದಲ್ಲಿವೆ. ನಾನು ಅನೇಕ ಇಷ್ಟವಾದ ಬ್ಲಾಗುಗಳನ್ನು ಪಟ್ಟಿ ಮಾಡಿದ್ದೂ, ಸಮಯ ಸಿಕ್ಕಾಗ ಓದುತ್ತ ಇರ್ತೀನಿ. ಇದರಲ್ಲಿ ಅನೇಕ ರೀತಿಯ ವಿಷಯಗಳಬಗ್ಗೆ ಲೇಖನಗಳು ನಿಮಗೆ ಸಿಗುತ್ತವೆ. ಕೆಲವರು ತಮ್ಮ ಅನುಭವಗಳಬಗ್ಗೆ ಬರೆದರೆ, ಕೆಲವರು ತಮ್ಮ ಪ್ರವಾಸ ಕಥನಗಳು, ಪುಸ್ತಕ ವಿಶ್ಲೇಷಣೆ, ಅಡುಗೆ, ರಾಜಕೀಯ, ಹಾಸ್ಸ್ಯ , ಹೀಗೆ ಬರಿತ ಹೋದರೆ, ಇನ್ನು ಕೆಲವರು ಕೇವಲ ಕವನಗಳಿಗೆ ತಮ್ಮ ಬ್ಲಾಗುಗಳನ್ನು ಸೀಮಿತಮಾಡಿರುವುದು ಕಂಡುಬರುತ್ತದೆ.
ಇತ್ತೀಚೆಗೆ ನಾನು ಅಲ್ಪ ಸ್ವಲ್ಪ ಈ ಬರೆಯುವ ಗೀಳು ಹಚ್ಚಿಕೊಂಡರು ಇನ್ನು ಅಷ್ಟೊಂದು ಪ್ರಭುದ್ದತೆ ಬಂದಿಲ್ಲ. ಆದರೆ ಈ ಬರೆಯುವ ಗೀಳು ಒಂಥರಾ ಸ್ಟ್ರೆಸ್ ಬಸ್ಟರ್ ಅನ್ನಬಹುದು. ಯಾಕಂದ್ರೆ ನಿಮ್ಮ ತಲೇಲಿ ಏನೇನೋ ಯೋಚನೆಗಳು, ವಿಚಾರಗಳು, ಅನುಭವಗಳು ಬರೋದು ಸಹಜ. ಅವನ್ನೆಲ್ಲ ಅಚ್ಚುಕಟ್ಟಾಗಿ ಒಂದು ರೂಪ ಕೊಟ್ಟು ಡೈರಿನಲ್ಲೋ, ಇಲ್ಲ ಇತ್ತೀಚಿನ ಬದ್ಧತಿಯಂತೆ ಬ್ಲಾಗಿನಲ್ಲೋ ಗೀಚಿ ಹೊರಹಾಕಿದರೆ, ಮನಸಿಗೆ ಏನೋ ಒಂಥರಾ ಹಗುರವಾದ ಬಾಸವಾಗುವುದು ಸಹಜ. ಎಲ್ಲವನ್ನು ಖಾಲಿ ಮಾಡಿ ರಿಲ್ಯಾಕ್ಸ್ ಆದ ಅನುಭವ ಬರುತ್ತದೆ.
ಲೇಖನಗಳ ಗುಣಮಟ್ಟವು, ಬರಹಗಾರರ ಭಾಷ ಶೈಲಿ, ವಿಷಯಗಳನ್ನು ಹೇಳುವ ರೀತಿ, ಓದುಗರನ್ನು ತರ್ಕಕ್ಕಿಳಿಸುವ ಚಾಕ್ಯಚಕ್ಕತೆ, ಇವುಗಳಮೇಲೆ ಅವಲಂಬಿತವಾಗಿರುತ್ತದೆ. ನನ್ನ ಅನುಭವದ ಪ್ರಕಾರ ಕರ್ನಾಟಕದಲ್ಲಿ ಎರಡು ಪ್ರಕಾರದ ಬರಹಗಾರರನ್ನಾಗಿ ವಿಂಗಡಿಸಬಲ್ಲೆ. ಈ ಬಯಲುಸೀಮೆ, ಮಧ್ಯ ಮತ್ತು ದಕ್ಷಿಣ ಕರ್ನಾಟಕದವರ ಬರವಣಿಗೆ ಒಂದು ಪ್ರಕಾರವಾದರೆ, ಮಲೆನಾಡಿನ ತಪ್ಪಲಿನಿಂದ ಬರುವ ಬರಹಗಾರರ ಶೈಲಿಯೇ ಬೇರೆ. ಮಲೆನಾಡಿನ ಹಚ್ಚ ಹಸುರಿನ ಪ್ರಕೃತಿ ಮಡಿಲಲ್ಲ ಬೆಳೆದು ಬಂದ ಈ ಮಹಾನುಭಾವರಲ್ಲಿ ಹುಟ್ಟಿನಿಂದಲೇ ಈ ಕಲೆ ಬಂದಿರುತ್ತೋ ಏನೋ ಗೊತ್ತಿಲ್ಲ, ಈ ಕಥೆ ಮತ್ತು ಕವನ ಬರೆಯುವುದರಲ್ಲಿ ಈ ಭಾಗದ ಜನರು ಎತ್ತಿದ ಕೈ. ಅವರ ಲೇಖನಗಳಲ್ಲಿ, ಆ ಹಸಿರು ಸಿರಿಯ ಗಿಡ-ಮರ, ಜರಿ-ಜಲಪಾತಗಳ ಮಧ್ಯೆ ಸುಯ್ಯಂತೆ ಸುಳಿದುಬರುವ ಸಂಪಾದ ತಂಗಾಳಿ ಸೋಕಿದಂತಹ ಅನುಭವ ಓದುಗರಿಗೆ ಬರುವುದು ಸರ್ವೇ ಸಾಮಾನ್ಯ. ಇದನ್ನು ಪ್ರಕೃತಿದತ್ತವಾಗಿ ಬಂದ ಬಳುವಳಿ ಎನ್ನಬಹುದೇ???
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ